Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:4
9 ತಿಳಿವುಗಳ ಹೋಲಿಕೆ  

ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.


ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.


“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು