Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಗುಡ್ಡಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀವಿುನ ಬಳಿಯಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀವಿುನ ಪಶ್ಚಿಮದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ “ದಾನ್ಯರ ಪಾಳೆಯ”ವೆಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:12
10 ತಿಳಿವುಗಳ ಹೋಲಿಕೆ  

ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.


ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.


ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.


ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.


ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ,


ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.


ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು