Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:28 - ಕನ್ನಡ ಸಮಕಾಲಿಕ ಅನುವಾದ

28 ಅದು ಸೀದೋನಿಗೆ ದೂರವಾಗಿದ್ದುದರಿಂದಲೂ, ಯಾವ ಮನುಷ್ಯನ ಸಂಗಡಲಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ಅವರನ್ನು ಕಾಪಾಡಲು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸಮೀಪವಾದ ತಗ್ಗಿನಲ್ಲಿ ಇತ್ತು. ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆ ಪಟ್ಟಣ ಚೀದೋನಿಗೆ ದೂರವಾಗಿದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯ ದೊರಕಲಿಲ್ಲ. ಬೇತ್ ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರುಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯದೊರಕಲಿಲ್ಲ. ಬೇತ್‍ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರಿಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲಯಿಷಿನಲ್ಲಿ ವಾಸಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:28
14 ತಿಳಿವುಗಳ ಹೋಲಿಕೆ  

ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”


ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.


ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.


ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವುದಕ್ಕೆ ತಮಗೆ ಬಾಧ್ಯತೆಯನ್ನು ಹುಡುಕುತ್ತಿದ್ದರು. ಏಕೆಂದರೆ ಅಂದಿನವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರೆತಿರಲಿಲ್ಲ.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರಿತ್ತು. ಈಗ ದಾನ್ಯರು ಆ ಪಟ್ಟಣಕ್ಕೆ ಇಸ್ರಾಯೇಲನಿಗೆ ಹುಟ್ಟಿದ ತಮ್ಮ ಮೂಲಪುರುಷನಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.


ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು