Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ಅವನಿಗೆ, “ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವುದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರು, “ದಯವಿಟ್ಟು ನಮ್ಮ ಪ್ರಯಾಣ ಸಫಲ ಆಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವರು ಅವನಿಗೆ - ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವದೋ ಇಲ್ಲವೋ ಎಂಬದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:5
12 ತಿಳಿವುಗಳ ಹೋಲಿಕೆ  

ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.


ಆ ಪಟ್ಟಣದಲ್ಲಿಯ ಹಿರಿಯರು, ಕಿರಿಯರು ಎಲ್ಲರೂ ಅವನನ್ನು ಗೌರವಿಸಿ, “ಈ ಮನುಷ್ಯನು ಮಹಾಶಕ್ತಿ ಎನಿಸಿಕೊಂಡ ದೇವರ ಶಕ್ತಿ” ಎಂದು ಹೇಳುತ್ತಿದ್ದರು.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.


ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.


ಆಗ ಮೀಕನು, “ನನಗೆ ಒಬ್ಬ ಲೇವಿಯನು ಯಾಜಕನಾಗಿರುವುದರಿಂದ, ಯೆಹೋವ ದೇವರು ನನಗೆ ಒಳ್ಳೆಯದನ್ನು ಮಾಡುವರೆಂದು ಈಗ ತಿಳಿಯುತ್ತೇನೆ,” ಎಂದುಕೊಂಡನು.


ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ಅವನು ಅವರಿಗೆ, “ಮೀಕನು ನನಗೆ ಹೀಗೆ ನಡೆಸುತ್ತಾ, ನನ್ನನ್ನು ಸಂಬಳಕ್ಕೆ ಇಟ್ಟುಕೊಂಡಿದ್ದಾನೆ. ನಾನು ಅವನಿಗೆ ಯಾಜಕನಾಗಿದ್ದೇನೆ,” ಎಂದನು.


ಆ ಯಾಜಕನು, “ಸಮಾಧಾನವಾಗಿ ಹೋಗಿರಿ. ನೀವು ಹೋಗುವ ನಿಮ್ಮ ಮಾರ್ಗಕ್ಕೆ ಯೆಹೋವ ದೇವರ ಒಪ್ಪಿಗೆ ಇದೆ,” ಎಂದನು.


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು