Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:9 - ಕನ್ನಡ ಸಮಕಾಲಿಕ ಅನುವಾದ

9 ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು - ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕೂತುಕೊಳ್ಳುವದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವತಂತ್ರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಐದು ಜನ, “ನಾವು ಒಂದು ಪ್ರದೇಶವನ್ನು ಹುಡುಕಿದ್ದೇವೆ. ಅದು ಬಹಳ ಚೆನ್ನಾಗಿದೆ. ತಡಮಾಡುವುದು ಬೇಡ. ಬೇಗ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:9
13 ತಿಳಿವುಗಳ ಹೋಲಿಕೆ  

ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ?


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


“ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.


ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.


ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.


ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.


ಅವರು ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರುಗಿ ಬಂದರು. ಅವರ ಸಹೋದರರಾದ ದಾನರು ಅವರಿಗೆ, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದರು.


ನೀವು ಅಲ್ಲಿಗೆ ತಲುಪಿದಾಗ, ಸಂಶಯಪಡದ ಜನರನ್ನು ಅಲ್ಲಿ ಕಾಣುವಿರಿ. ಅದು ವಿಸ್ತಾರವಾದ ದೇಶವಾಗಿದೆ. ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ಆ ಪ್ರದೇಶದಲ್ಲಿ ಯಾವ ಕೊರತೆಯು ಇರುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು