Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಒಬ್ಬ ಮುದುಕನು ಹೊಲದಲ್ಲಿ ತನ್ನ ಕೆಲಸಮಾಡಿ ಬರುತ್ತಿದ್ದನು. ಆ ಮನುಷ್ಯನು ಎಫ್ರಾಯೀಮ್ ಬೆಟ್ಟದ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನರ ಊರಾದ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಷ್ಟರಲ್ಲಿ ಎಫ್ರಾಯೀಮ್ ಪರ್ವತ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನೂ ಆಗಿದ್ದ ಒಬ್ಬಾನೊಬ್ಬ ಮುದುಕನು ಸಾಯಂಕಾಲವಾದದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:16
16 ತಿಳಿವುಗಳ ಹೋಲಿಕೆ  

ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗಿ ಸಾಯಂಕಾಲದವರೆಗೆ ದುಡಿಯುತ್ತಾನೆ.


ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.


ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.


ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.


ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.


ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.


ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.


ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.


ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾಮೀನನಿಗೆ ಸೇರಿದ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯ ಮುಳುಗಿತ್ತು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆದ್ದರಿಂದ ಅವರು ಗಿಬೆಯದಲ್ಲಿ ರಾತ್ರಿ ಕಳೆಯಲು ಉಳಿದರು. ಅವರು ಹೋಗಿ ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. ಮನೆಯಲ್ಲಿ ಇಳಿದುಕೊಳ್ಳುವುದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳಲಿಲ್ಲ.


ಆ ಮುದುಕನು ತನ್ನ ಕಣ್ಣೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದ ಯಾತ್ರಿಕನನ್ನು ಕಂಡು, “ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ?” ಎಂದನು.


ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು