Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:6 - ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:6
15 ತಿಳಿವುಗಳ ಹೋಲಿಕೆ  

ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.


ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.


ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಆ ಮನುಷ್ಯನು ಎದ್ದು ಹೊರಡಲು ಸಿದ್ಧನಾದಾಗ, ಅವನ ಮಾವನು ಅವನನ್ನು ಆ ರಾತ್ರಿ ಅಲ್ಲಿಯೇ ಇರುವಂತೆ ಒಪ್ಪಿಸಿದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು