Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:1
41 ತಿಳಿವುಗಳ ಹೋಲಿಕೆ  

ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು.


ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.


ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.


ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು, ಅಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಿದರು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.


ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.


ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.


ಆದರೆ ಚೊರ್ಗದವನಾದ ದಾನನ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಮಕ್ಕಳನ್ನು ಹೆರದೆ, ಬಂಜೆಯಾಗಿದ್ದಳು.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.


ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು