Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:19 - ಕನ್ನಡ ಸಮಕಾಲಿಕ ಅನುವಾದ

19 ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:19
20 ತಿಳಿವುಗಳ ಹೋಲಿಕೆ  

ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.


ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.


ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


“ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ?


ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.


ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.


“ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು