Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:1
35 ತಿಳಿವುಗಳ ಹೋಲಿಕೆ  

ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.


ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.


ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ,


ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.


ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.


ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು.


ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.


ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.


ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.


ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.


ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.


ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಹೀಗೆಯೇ ಇಸ್ರಾಯೇಲರೆಲ್ಲರೂ ಒಟ್ಟಾಗಿ ಆ ಪಟ್ಟಣದ ಮುಂದೆ ಕೂಡಿದರು.


ಆಗ ಸಮಸ್ತ ಜನರೂ ಒಟ್ಟಾಗಿ ಎದ್ದು, “ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ತನ್ನ ಮನೆಗೆ ಹಿಂದಿರುಗದಿರಲಿ.


ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.


ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರಿತ್ತು. ಈಗ ದಾನ್ಯರು ಆ ಪಟ್ಟಣಕ್ಕೆ ಇಸ್ರಾಯೇಲನಿಗೆ ಹುಟ್ಟಿದ ತಮ್ಮ ಮೂಲಪುರುಷನಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.


ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಮಿಚ್ಪೆ, ಕೆಫೀರಾ, ಮೋಚಾ,


ದಿಲಾನ್, ಮಿಚ್ಪೆ, ಯೊಕ್ತೇಲ್,


ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.


ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.


ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.


ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.


ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.


ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.


ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು