Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:13 - ಕನ್ನಡ ಸಮಕಾಲಿಕ ಅನುವಾದ

13 ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:13
30 ತಿಳಿವುಗಳ ಹೋಲಿಕೆ  

ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.


ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.


ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು?


ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?


ಇಸ್ರಾಯೇಲರ ಸಂಗಡ ಯುದ್ಧಮಾಡುವುದಕ್ಕೆ ಹೊರಡುವ ಹಾಗೆ ಪಟ್ಟಣಗಳಲ್ಲಿಂದ ಗಿಬೆಯದಲ್ಲಿ ಬಂದು ಕೂಡಿದರು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು