Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:6 - ಕನ್ನಡ ಸಮಕಾಲಿಕ ಅನುವಾದ

6 ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಇಸ್ರಾಯೇಲ್ಯರಲ್ಲಿ ನಡಿಸಿದ ಇಂಥ ಕೆಟ್ಟ ಹುಚ್ಚುಗೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:6
9 ತಿಳಿವುಗಳ ಹೋಲಿಕೆ  

ಅವನು ತನ್ನ ಮನೆಗೆ ಹೋದಾಗ, ಒಂದು ಖಡ್ಗವನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡುಗಳಾಗಿ ಕಡಿದು, ಅವುಗಳನ್ನು ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿದನು.


ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ, ಅವರಿಗೆ, “ಹಾಗೆ ಮಾಡಬೇಡಿರಿ. ನನ್ನ ಸಹೋದರರೇ, ದಯಮಾಡಿ ಕೆಟ್ಟತನ ಮಾಡಬೇಡಿರಿ. ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥ ಬುದ್ಧಿಹೀನತೆಯನ್ನು ಮಾಡಬೇಡಿರಿ.


ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”


ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.


ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು.


“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು