Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:14 - ಕನ್ನಡ ಸಮಕಾಲಿಕ ಅನುವಾದ

14 ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:14
7 ತಿಳಿವುಗಳ ಹೋಲಿಕೆ  

ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.


ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.


ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.


ಇಸ್ರಾಯೇಲಿನ ಗೋತ್ರಗಳಲ್ಲಿ ಮಿಚ್ಪೆಗೆ ಯೆಹೋವ ದೇವರ ಬಳಿಗೆ ಬಾರದವರು ಯಾರಾದರೂ ಒಬ್ಬರಿದ್ದಾರೋ?” ಎಂದರು. ಆಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದಿರಲಿಲ್ಲ.


ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.


ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.


ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು