Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:10 - ಕನ್ನಡ ಸಮಕಾಲಿಕ ಅನುವಾದ

10 ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:10
24 ತಿಳಿವುಗಳ ಹೋಲಿಕೆ  

ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,


ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.


ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.


ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.


ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,


ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ


ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.


ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,


ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.


ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.


ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.


ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು