Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:15
22 ತಿಳಿವುಗಳ ಹೋಲಿಕೆ  

ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.


ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಎಡಬಲ ಕೈಗಳಿಂದ ಕಲ್ಲುಗಳನ್ನು ಎಸೆಯಲೂ, ಬಿಲ್ಲುಗಳಿಂದ ಬಾಣಗಳನ್ನು ಎಸೆಯಲೂ, ಇವರು ಬೆನ್ಯಾಮೀನನ ಗೋತ್ರದ ಸೌಲನ ಸಂಬಂಧಿಕರೂ ಆಗಿದ್ದರು.


ಈ ಸಮಸ್ತ ಜನರಲ್ಲಿ ಆರಿಸಿದ ಏಳು ನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.


ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.


ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,


ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.


ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.


ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.


ಬೆಳನ ಪುತ್ರರು: ಅದ್ದಾರ್, ಗೇರ, ಅಬೀಹೂದ್,


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು