Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:28 - ಕನ್ನಡ ಸಮಕಾಲಿಕ ಅನುವಾದ

28 ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:28
12 ತಿಳಿವುಗಳ ಹೋಲಿಕೆ  

ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.


ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.


ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು.


ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.


ಅನಂತರ ಗಿದ್ಯೋನನು, “ನಾನು ಮಾಡುವುದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ನಾನು ಪಾಳೆಯ ಹೊರಗೆ ಬಂದಾಗ ಹೇಗೆ ಮಾಡುವೆನೋ, ಹಾಗೆಯೇ ನೀವೂ ಮಾಡಿರಿ.


ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.


ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.


ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು.


ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,


ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು