Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:5 - ಕನ್ನಡ ಸಮಕಾಲಿಕ ಅನುವಾದ

5 ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:5
18 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.


ಇದಲ್ಲದೆ ಗಿಬ್ಯೋನ್, ರಾಮಾ, ಬೇರೋತ್,


ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,


ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,


ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.


ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು.


ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.


ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.


ಅವರಿಗೆ ಏನಾದರೂ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ,” ಎಂದನು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು.


ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು.


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು