Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:15 - ಕನ್ನಡ ಸಮಕಾಲಿಕ ಅನುವಾದ

15 ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. ರೂಬೇನನ ಕಡೆಯವರು ತಮ್ಮ ಹೃದಯಗಳನ್ನು ಮಹಾ ಪರಿಶೋಧನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲ ಪ್ರಭುಗಳೂ ಇಸ್ಸಾಕಾರ್ಯರೊಡನೆ ಬಾರಾಕನೂ ಆಗವಿುಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ಸರ್ರನೆ ತಗ್ಗಿಗೆ ಬಂದರು. ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ತೀರ್ಮಾನಗಳು ಘನವಾದವುಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. “ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:15
10 ತಿಳಿವುಗಳ ಹೋಲಿಕೆ  

ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು.


ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,


ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.


ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.


ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.


ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು