Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:2
23 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.


ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.


ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.


ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು.


ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.


ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು