Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:13
22 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.


ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’


ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.


ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.


ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.


ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು