Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:24 - ಕನ್ನಡ ಸಮಕಾಲಿಕ ಅನುವಾದ

24 ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:24
20 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು.


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಜನರು ಮಾರನೆಯ ದಿವಸ ಉದಯದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ, ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;


ಆದರೆ ಯೆಹೋವ ದೇವರು ಅವನಿಗೆ, “ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವುದಿಲ್ಲ,” ಎಂದರು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು.


ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.


ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು