Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:37 - ಕನ್ನಡ ಸಮಕಾಲಿಕ ಅನುವಾದ

37 ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇಗೋ, ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜು ಬಿದ್ದು ನೆಲವೆಲ್ಲಾ ಒಣಗಿದ್ದರೆ ನೀವು ಹೇಳಿದಂತೆಯೇ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೆಂದು ತಿಳಿಯುವೆನು,” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇಗೋ, ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ, ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು ಎಂಬದಾಗಿ ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:37
11 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.


ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,


ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.


ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು