Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಮಾತನಾಡುವುದನ್ನು ಕೇಳು. ತರುವಾಯ ಪಾಳೆಯಲ್ಲಿ ಇಳಿದು ಹೋಗುವುದಕ್ಕೆ ನಿನ್ನ ಕೈಗಳು ಬಲಗೊಳ್ಳುವುವು,” ಎಂದರು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ಪಾಳೆಯ ಹೊರಗಿರುವ ಸೈನಿಕರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವರ ಮೇಲೆ ಬೀಳುವದಕ್ಕೆ ನಿನಗೆ ಧೈರ್ಯ ಬರುವದು ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:11
15 ತಿಳಿವುಗಳ ಹೋಲಿಕೆ  

ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.


ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.


ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.


ಠಾಣ್ಯಕ್ಕೆ ಮನುಷ್ಯರು ಯೋನಾತಾನನಿಗೂ, ಅವನ ಆಯುಧ ಹೊರುವವನಿಗೂ, “ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ, ನಿಮಗೆ ಪಾಠ ಕಲಿಸುತ್ತೇನೆ,” ಎಂದು ಕೂಗಿದರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ನನ್ನ ಹಿಂದೆ ಏರಿ ಬಾ. ಏಕೆಂದರೆ ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು,” ಎಂದನು.


ಇಳಿದು ಹೋಗುವುದಕ್ಕೆ ನೀನು ಭಯಪಟ್ಟರೆ, ಮೊದಲು ನೀನು ನಿನ್ನ ಸೇವಕನಾದ ಪುರನ ಸಂಗಡ ಪಾಳೆಯ ಬಳಿಗೆ ಇಳಿದು ಹೋಗಿ,


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು