Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:2
25 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ. ಹೆಚ್ಚಿಸಿಕೊಂಡರೆ, ನೀನು ಆ ಬೇರಿನ ಆಧಾರವಲ್ಲ. ಆ ಬೇರೇ ನಿನಗೆ ಆಧಾರವಾಗಿದೆ.


ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.


“ಇದಲ್ಲದೆ ದಾವೀದನ ಮನೆಯ ಘನತೆಯೂ, ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ, ಯೆಹೋವ ದೇವರು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವರು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”


ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು