Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಗಲಿಬಿಲಿಗೊಂಡು ಚೀರುತ್ತಾ ಓಡಿಹೋಗಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು; ಪಾಳೆಯದವರಾದರೋ ಭ್ರಾಂತರಾಗಿ ಕೂಗುತ್ತಾ ಓಡಿಹೋಗ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಗಿದ್ಯೋನನ ಜನರು ನಿಂತಲ್ಲಿಯೇ ನಿಂತುಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿಹೋಗಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:21
12 ತಿಳಿವುಗಳ ಹೋಲಿಕೆ  

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.


ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.


ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು