Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:24 - ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:24
7 ತಿಳಿವುಗಳ ಹೋಲಿಕೆ  

ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.


ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.


ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು