Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:9 - ಕನ್ನಡ ಸಮಕಾಲಿಕ ಅನುವಾದ

9 ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:9
23 ತಿಳಿವುಗಳ ಹೋಲಿಕೆ  

ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.


ಆಗ ಜನರು ಆಹಾರವನ್ನೂ, ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು. ಆದರೆ ಗಿದ್ಯೋನನು ಇಸ್ರಾಯೇಲರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ, ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳಭಾಗದ ಕಣಿವೆಯಲ್ಲಿ ಇತ್ತು.


ಇಳಿದು ಹೋಗುವುದಕ್ಕೆ ನೀನು ಭಯಪಟ್ಟರೆ, ಮೊದಲು ನೀನು ನಿನ್ನ ಸೇವಕನಾದ ಪುರನ ಸಂಗಡ ಪಾಳೆಯ ಬಳಿಗೆ ಇಳಿದು ಹೋಗಿ,


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಆಗ ಯೋನಾತಾನನು, “ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು