Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ - ನೀನು ಹೀಗೆ ಯಾಕೆ ಮಾಡಿದಿ? ವಿುದ್ಯಾನ್ಯರೊಡನೆ ಯುದ್ಧಮಾಡುವದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ ಎಂದು ಉಗ್ರದಿಂದ ಕಲಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:1
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ?


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.


ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು