Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:12 - ಕನ್ನಡ ಸಮಕಾಲಿಕ ಅನುವಾದ

12 ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜೆಬಹನೂ ಚಲ್ಮುನ್ನನೂ ಓಡಿ ಹೋಗಲಾಗಿ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:12
12 ತಿಳಿವುಗಳ ಹೋಲಿಕೆ  

ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.


ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು.


ಯೋವಾಷನ ಮಗನಾದ ಗಿದ್ಯೋನನು ಯುದ್ಧ ತೀರಿಸಿಕೊಂಡು ಹೆರೆಸ್ ಎಂಬ ಬೆಟ್ಟದ ಮಾರ್ಗವಾಗಿ ತಿರುಗಿಬಂದು,


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು