Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:21
13 ತಿಳಿವುಗಳ ಹೋಲಿಕೆ  

ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.


ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,


ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.


ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.


ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ.


ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.


ಇದಲ್ಲದೆ ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು. ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು.


ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.


ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.


ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.


ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು