Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬರವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?”, ಎಂದು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಸುಖೋತಿನ ಮುಖಂಡರು ಅವನಿಗೆ - ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:6
11 ತಿಳಿವುಗಳ ಹೋಲಿಕೆ  

ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.


ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.


ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.


ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ


ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’


ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಜನನದ ಪ್ರಕಾರ ಇಷ್ಮಾಯೇಲನ ಪುತ್ರರ ಹೆಸರುಗಳು ಇವೇ: ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತ್, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು