Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:2 - ಕನ್ನಡ ಸಮಕಾಲಿಕ ಅನುವಾದ

2 “ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:2
8 ತಿಳಿವುಗಳ ಹೋಲಿಕೆ  

ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು.


ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಇಸ್ರಾಯೇಲರೆಲ್ಲರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ಇಗೋ, ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.


ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.


ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು