Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಏಬೆದನ ಮಗನಾದ ಗಾಳನು, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬೂಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ. ಇವನನ್ನು ನಾವು ಏಕೆ ಸೇವಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಬೇದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನಿಗೆ ಏಕೆ ಸೇವೆಮಾಡಬೇಕು? ಅವನು ಯೆರುಬ್ಬಾಳನ ಮಗನಲ್ಲವೇ? ಅವನ ಪುರಾಧಿಕಾರಿ ಜೆಬುನಲ್ಲವೇ? ನಾವು ಅವನಿಗೆ ಏಕೆ ಸೇವೆಮಾಡಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರಿಗೇ ಸೇವೆಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:28
8 ತಿಳಿವುಗಳ ಹೋಲಿಕೆ  

ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.


ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.


ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,


ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.


ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು