Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:5 - ಕನ್ನಡ ಸಮಕಾಲಿಕ ಅನುವಾದ

5 ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:5
15 ತಿಳಿವುಗಳ ಹೋಲಿಕೆ  

ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.


ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.


“ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು.


“ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು.


ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.


ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,


ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.


ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.


ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು