Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:4 - ಕನ್ನಡ ಸಮಕಾಲಿಕ ಅನುವಾದ

4 ಅವನು ಔತಣದ ಮನೆಗೆ ನನ್ನನ್ನು ಕರೆದುಕೊಂಡು ಬಂದನು. ನನ್ನ ಮೇಲೆ ಇರುವ ಅವನ ಧ್ವಜವು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬರಮಾಡಿಕೊಂಡನು ನನ್ನನು ಔತಣದ ಮನೆಗೆ ನನ್ನ ಮೇಲೆತ್ತಿದನು ‘ಪ್ರೀತಿ’ ಎಂಬ ತನ್ನ ಪತಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ನನ್ನನ್ನು ಔತಣಶಾಲೆಗೆ ಬರಮಾಡಿಕೊಂಡನು, ನನ್ನ ಮೇಲೆ ಅವನು ಎತ್ತಿದ ಧ್ವಜವು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:4
16 ತಿಳಿವುಗಳ ಹೋಲಿಕೆ  

ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.


ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.


ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.


ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು