Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:6 - ಕನ್ನಡ ಸಮಕಾಲಿಕ ಅನುವಾದ

6 ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:6
19 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನೇ, ಹೊತ್ತು ಮೂಡುವ ಮುಂಚೆ ಕತ್ತಲು ಕವಿಯುವ ಮೊದಲು ಹೊರಟು ಬಾ. ಒರಟಾದ ಪರ್ವತಗಳ ಮೇಲಿರುವ ಜಿಂಕೆಯಂತಿರು. ಹೌದು, ಪ್ರಾಯದ ದುಪ್ಪಿಯಂತೆಯೂ ಇರು.


ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.


ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಕೊಬ್ಬಿದ ದಹನಬಲಿಗಳನ್ನು ಕಾಣಿಕೆಯಾಗಿ ಟಗರುಗಳನ್ನು; ಹೋತ ಹೋರಿಗಳ ಯಜ್ಞವನ್ನು ಅರ್ಪಿಸುವೆನು.


ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.


ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು