Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:11 - ಕನ್ನಡ ಸಮಕಾಲಿಕ ಅನುವಾದ

11 ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:11
14 ತಿಳಿವುಗಳ ಹೋಲಿಕೆ  

ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.


ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು.


ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ.


ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.


ಆ ದ್ರಾಕ್ಷಿಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ, ಹೂವು ಅರಳಿ, ಅದರ ಗೊಂಚಲುಗಳು ಹಣ್ಣಾದವು.


ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.


ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು