Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:1 - ಕನ್ನಡ ಸಮಕಾಲಿಕ ಅನುವಾದ

1 ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯಾ ಪುಸ್ತಕಾತ್ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲೆ ಸಗ್ಳೆ ಲಿವ್ನ್ ಥವಲ್ಲೆ ಹಾಯ್. ಅಪ್ನಾಚ್ಯಾ ಸೆವಕಾಕ್ನಿ ಕಾಯ್-ಕಾಯ್ ಲಗ್ಗುನಾಚ್ ಘಡ್ನಾರ್ ಹಾಯ್ ಮನುನ್ ದಾಕ್ವುಸಾಟ್ನಿ ಕ್ರಿಸ್ತಾನ್ ದೆವ್‍ದುತಾಕ್ ಧಾಡುನ್ ಅಪ್ನಾಚ್ಯಾ ಸೆವಕಾಕ್ ಜುವಾಂವಾಕ್ ಹೆ ಸಗ್ಳೆ ಕಳ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:1
30 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.


ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ.


“ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.


ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಆ ಕುರಿಮರಿ ಆಗಿರುವವರು ಬಂದು ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯೊಳಗಿಂದ ಸುರುಳಿಯನ್ನು ತೆಗೆದುಕೊಂಡರು.


ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.


ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು