Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:17 - ಕನ್ನಡ ಸಮಕಾಲಿಕ ಅನುವಾದ

17 ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಕಾ ಬಗಟಲ್ಲ್ಯಾ ತನ್ನಾ ಮರಲ್ಲ್ಯಾ ಸರ್ಕೊ ಹೊವ್ನ್ ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡ್ಲೊ, ತೆನಿ ಅಪ್ನಾಚೊ ಹಾತ್ ಮಾಜೆ ವರ್ತಿ ಥವ್ಲ್ಯಾನ್ ಅನಿ, ಭಿಂವ್‍ನಕೊ ಮಿಯಾಚ್ ಆರಂಬ್ ಅನಿ ಅಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:17
30 ತಿಳಿವುಗಳ ಹೋಲಿಕೆ  

“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.


“ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು.


ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.


ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.


ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.


ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು