Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:5 - ಕನ್ನಡ ಸಮಕಾಲಿಕ ಅನುವಾದ

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕೊನ್‍ಬಿ ತೆಂಕಾ ಧಕ್ಕೊ ಕರುಕ್ ಬಗಟ್ಲ್ಯಾರ್, ತೆಂಚ್ಯಾ ತೊಂಡಾನಿತ್ನಾ ಆಗ್ ಭಾಯ್ರ್ ಯೆವ್ನ್ ತೆಂಚ್ಯಾ ದುಸ್ಮಾನಾಕ್ನಿ ನಾಸ್ ಕರುನ್ ಸೊಡ್ತಾ; ಅಸೆ ತೆಂಕಾ ಧಕ್ಕೊ ಕರುಕ್ ಬಗಟಲ್ಲ್ಯಾಕ್ನಿ ಜಿವಾನಿಚ್ ಮಾರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:5
13 ತಿಳಿವುಗಳ ಹೋಲಿಕೆ  

ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”


ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.


ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.


ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು