Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:6 - ಕನ್ನಡ ಸಮಕಾಲಿಕ ಅನುವಾದ

6 ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಂಕಾ ಮಳಬ್ ಧಾಪ್ತಲೊ ಅದಿಕಾರ್‍ಬಿ ಹಾಯ್ ತಸೆ ಮನುನ್ ತೆನಿ ದೆವಾಚಿ ಬಾತ್ಮಿ ಸಾಂಗ್ತಲ್ಯಾ ದಿಸಾತ್ನಿ ಪಾವ್ಸ್ ರ್‍ಹಾಯ್ನಾ. ತೆಂಕಾ ಪಾನಿಯಾಂಚ್ಯಾ ಝರ್‍ಯಾಕ್ನಿ ರಗಾತ್ ಕರುನ್ ಬದಲ್ತಲೊ ಅದಿಕಾರ್‍ಬಿ ದಿಲ್ಲೊ ಹಾಯ್; ತೆಂಚ್ಯಾ ಮನಾಕ್ ಯೆತಾ ತನ್ನಾ ಜಿಮ್ನಿ ವರ್ತಿ ಸಗ್ಳ್ಯಾ ಥರಿಚಿ ಕಸ್ಟಾ ಧಾಡ್ತಲೊ ಅದಿಕಾರ್‍ಬಿ ತೆಂಕಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:6
11 ತಿಳಿವುಗಳ ಹೋಲಿಕೆ  

ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.


ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಎರಡನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಸಮುದ್ರದ ಮೇಲೆ ಸುರಿಯಲು, ಅದು ಸತ್ತ ಮನುಷ್ಯನ ರಕ್ತದಂತಾಯಿತು, ಸಕಲ ಜೀವಿಗಳೂ ಸತ್ತವು.


ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು