Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಸರ್ಗಾತ್ ಮೊಟೊ ಧನ್ ಮಿಯಾ ಆಯಿಕ್ಲೊ, “ಅತ್ತಾ ದೆವಾಚಿ ಸುಟ್ಕಾ ಯೆಲಾ! ಅತ್ತಾ ದೆವಾನ್ ಎಕ್ ರಾಜಾ ಸರ್ಕೊ ಅಪ್ಲೊ ಬಳ್ ದಾಕ್ವುಲ್ಯಾನಾಯ್! ಅತ್ತಾ ತ್ಯೆಚ್ಯಾ ಕ್ರಿಸ್ತಾನ್ ಅಪ್ನಾಚೊ ಅಧಿಕಾರ್ ದಾಕ್ವುಲ್ಯಾನಾಯ್! ದೆವಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ವಿಶ್ವಾಸ್, ಹೊತ್ಯಾ ಭಾವ್ ಭೆನಿಕ್ನಿ ಕರ್ತಲ್ಯಾಕ್ನಿ ದಿಸ್ ಅನಿ ರಾತ್ ಪಸ್ವುತಲ್ಯಾಕ್ ಸರ್ಗಾತ್ನಾ ಕಾಡುನ್ ಭಾಯ್ರ್ ಟಾಕುನ್ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:10
24 ತಿಳಿವುಗಳ ಹೋಲಿಕೆ  

“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ?


ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ.


ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು.


ನೀವು ಕರ್ತ ಯೇಸುವಿನ ಹೆಸರಿನಲ್ಲಿ ಸಭೆಯಾಗಿ ಬಂದು ಸೇರಿದಾಗ, ನಾನೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನಮಗೆ ಕರ್ತ ಆಗಿರುವ ಯೇಸುವಿನ ಸಾನಿಧ್ಯ ಶಕ್ತಿಯೊಂದಿರುವಾಗ,


ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು