Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ತೊ ಭಯಾನಕ್ ಸಾಂಪ್ ತ್ಯಾ ಭಾಯ್ಕೊಮನ್ಸಿ ವರ್ತಿ ಲೈ ರಾಗ್ ಹೊಲೊ, ಅನಿ ತೊ ತಿಚ್ಯಾ ಪಿಳ್ಗಿಚ್ಯಾ ಮಟ್ಲ್ಯಾರ್ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾ, ಅನಿ ಜೆಜುಚಿ ಸಾಕ್ಷಿ ಹೊವ್ನ್ ಹೊತ್ಯಾ ಸಗ್ಳ್ಯಾ ಲೊಕಾಂಚ್ಯಾ ವಿರೊದ್ ಮಾರಾಮಾರಿ ಕರುಕ್ ಉಟಲ್ಲೊ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:17
26 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.


ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.


ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.


ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.


ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.


ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆಯುವುದರಿಂದಲೇ ದೇವರನ್ನು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು