Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:15 - ಕನ್ನಡ ಸಮಕಾಲಿಕ ಅನುವಾದ

15 ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತಾಡುವದು; ತನಗೆ ನಮಸ್ಕರಿಸದವರೆಲ್ಲರಿಗೂ ಮರಣದಂಡನೆ ಆಗುವಂತೆ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಸೆ, ತಿ ಮುರ್ತಿ ಬೊಲುಚೆ ಅನಿ ಅಪ್ನಾಚೆ ಆರಾದನ್ ಕರಿನಸಲ್ಲ್ಯಾ ಸಗ್ಳ್ಯಾಕ್ನಿ ಜಿವಾನಿ ಮಾರುಚೆ ಮನುನ್ ತ್ಯಾ ದೊನ್ವೆಚ್ಯಾ ಜನಾವರಾನ್ ತ್ಯಾ ಪಯ್ಲೆಚ್ಯಾ ಜನಾವರಾಚ್ಯಾ ಮುರ್ತಿತ್ ಸ್ವಾಸ್ ಪುಕುಕ್ ಸೊಡಲ್ಲೆ ಹೊತ್ತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:15
25 ತಿಳಿವುಗಳ ಹೋಲಿಕೆ  

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.


ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


“ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ.


ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.


ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.


ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ.


ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”


ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು