Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:10 - ಕನ್ನಡ ಸಮಕಾಲಿಕ ಅನುವಾದ

10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿಬಿ ದೆವಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿತ್ಯಾತ್! ದೆವಾಚೊ ರಾಗ್ ಮನ್ತಲ್ಯಾ ಆಯ್ದಾನಾತ್ ತೊ ವಾಯ್ನ್ ಪುರಾ ತಾಕ್ತಿನ್ ವೊತುನ್ ಹೊಲಾ, ಹೆ ಸಗ್ಳೆ ಕರಲ್ಲೆ ಸಗ್ಳೆ ಜಾನಾ ಪವಿತ್ರ್ ದೆವ್‍ದುತಾಂಚ್ಯಾ ಅನಿ ಬೊಕ್ಡಾಚ್ಯಾ ಇದ್ರಾಕ್ ಆಗಿತ್ ಅನಿ ಗಂದಕಾತ್ ತರಾಸ್ ಕರುನ್ ಘೆತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:10
45 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.


ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.


ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.


ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.


ಆದ್ದರಿಂದ ಜನರು ಅವರ ಕಡೆಗೆ ತಿರುಗುತ್ತಾರೆ. ಜನರಿಗೆ ಅವರ ಮಾತು ಬಹಳವಾಗಿ ದೊರೆಯುತ್ತದೆ.


ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು,


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು