Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ದೂತನಾದ ಮತ್ತೊಬ್ಬನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ - ಭೂವಿುಯ ಪೈರು ಮಾಗಿ ಒಣಗಿದೆ; ಕೊಯ್ಯುವ ಕಾಲ ಬಂತು; ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಎಂದು ಮಹಾ ಶಬ್ದದಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಅನಿಎಕ್ ದೆವ್‍ದುತಾ ಗುಡಿತ್ನಾ ಭಾಯ್ರ್ ಯೆಲೊ, ಅನಿ ತ್ಯಾ ಮೊಡಾ ವರ್ತಿ ಬಸಲ್ಲ್ಯಾಕ್ ಮೊಟ್ಯಾನ್, “ತುಜೊ ಧಾರ್‍ಲೊ ಇಳೊ ವಾಪರ್ ಅನಿ ಪಿಕ್ ಕಾತರ್ ಕಶ್ಯಾಕ್ ಮಟ್ಲ್ಯಾರ್ ಜಿಮ್ನಿಚ್ಯಾ ಕಾತ್ರನಿಚೊ ಎಳ್ ಯೆವ್ನ್ ಪಾವ್ಲಾ!” ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:15
20 ತಿಳಿವುಗಳ ಹೋಲಿಕೆ  

ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.


ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.


ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.


ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”


ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.


ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.


ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.


ನಾನು ನೋಡಲಾಗಿ, ಒಂದು ಬಿಳಿ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯಪುತ್ರರಂತೆ ಒಬ್ಬರು ಕುಳಿತಿರುವುದನ್ನು ಕಂಡೆನು. ಅವರ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು.


ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು