Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:3 - ಕನ್ನಡ ಸಮಕಾಲಿಕ ಅನುವಾದ

3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:3
49 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.


ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”


ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.


ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ.


ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.


ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.


ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.


ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.


ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ.


ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು