Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:5 - ಕನ್ನಡ ಸಮಕಾಲಿಕ ಅನುವಾದ

5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನಗುಡಾರದ ಪವಿತ್ರಸ್ಥಾನವು ತೆರೆಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆಚ್ಯಾ ಮಾನಾ ಸರ್ಗಾತ್ ಗುಡಿ ಉಗಡಲ್ಲೆ ಮಿಯಾ ಬಗಟ್ಲೊ. ತ್ಯಾತುರ್ ಎಕ್ ಪವಿತ್ರ್ ಝೊಪ್ಡೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:5
8 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.


ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.


ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.


ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?


ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು