Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:7 - ಕನ್ನಡ ಸಮಕಾಲಿಕ ಅನುವಾದ

7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ಚಾರ್ ಝಿತ್ತ್ಯಾ ಸಾವ್ಜಾನಿತ್ಲ್ಯಾ ಎಕ್ ಸಾವ್ಜಾನ್ ತ್ಯಾ ಸಾತ್ ದೆವಾಚ್ಯಾ ದುತಾಕ್ನಿ ಸದಾ ಸರ್ವತಾಕ್‍ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ರಾಗಾನಿ ಭರಲ್ಲೆ ಸಾತ್ ಸೊನ್ಯಾಚೆ ಕಟೊರೆ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:7
13 ತಿಳಿವುಗಳ ಹೋಲಿಕೆ  

ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು