Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:1 - ಕನ್ನಡ ಸಮಕಾಲಿಕ ಅನುವಾದ

1 ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ದೆವಾಚ್ಯಾ ಗುಡಿಚ್ಯಾ ಸಾತ್ ದೆವ್‍ದುತಾನಿಕ್ಡೆ ಬೊಲ್ತಲೊ ಅವಾಜ್ ಮಿಯಾ ಆಯಿಕ್ಲೊ; “ಜಾವಾ ಅನಿ ತ್ಯಾ ಸಾತ್ ದೆವಾಚ್ಯಾ ರಾಗಾಚ್ಯಾ ಕಟೊರ್‍ಯಾನಿತ್ಲೆ ಜಗಾ ವರ್ತಿ ವೊತಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:1
17 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.


ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ, ನಿಮ್ಮ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿಮ್ಮ ಕೋಪವನ್ನು ಸುರಿಸಿಬಿಡಿರಿ.


ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.


ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು